ರಸ್ತೆ ಅಪಘಾತ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಒಂದು ವರ್ಷದಲ್ಲಿ 9,943 ಸಾವು, ನಿಯಂತ್ರಿಸಲು ಸಮನ್ವಯ ಅಗತ್ಯ.
ಅಪಘಾತಗಳ ನಿಯಂತ್ರಣಕ್ಕೆ ಸಮನ್ವಯ ಅಗತ್ಯ
ಬೆಂಗಳೂರು: ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ರಸ್ತೆ ಅಪಘಾತಗಳ ಸಂಖ್ಯೆ ಏರಿಕೆಯಾಗುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಜನರ ಅಮೂಲ್ಯ ಪ್ರಾಣ ಹೋದರೆ ಸಹಿಸಲ್ಲ,” ಎಂದು ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಸುರಕ್ಷತಾ ಕ್ರಮಗಳ ಪರಿಶೀಲನೆಗೆ ತಾಕೀತು
ಸಾರಿಗೆ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಅಪಘಾತಗಳ ನಿಯಂತ್ರಣಕ್ಕೆ ಸಮನ್ವಯ ಅಗತ್ಯವಿದೆ. ಅಪಘಾತ ವಲಯ ಮತ್ತು ಬ್ಲಾಕ್ ಸ್ಪಾಟ್ ಗುರುತಿಸಿ, ಕೈಕಟ್ಟಿ ಕುಳಿತರೆ ನಿಮ್ಮ ಜವಾಬ್ದಾರಿ ಮುಗಿಯುವುದಿಲ್ಲ. ರಸ್ತೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಬೇಕು” ಎಂದು ತಾಕೀತು ಮಾಡಿದ್ದಾರೆ.
Also Read: Viral Video: ರೀಲ್ಸ್ ಮೂಲಕ ಹೊಸ ಸ್ಕೂಟಿ ಖರೀದಿಸಿದ ರೀಲ್ಸ್ ಸ್ಟಾರ್ ಮಂಗಳ ಅರುಣ್, ಫೋಟೋ ವೈರಲ್
ರಾಜ್ಯದ ಅಪಘಾತಗಳ ಸ್ಥಿತಿ
ಕಳೆದ ಒಂದು ವರ್ಷದ ಅವಧಿಯಲ್ಲಿ ರಾಜ್ಯದಲ್ಲಿ 34,916 ಅಪಘಾತಗಳು ಸಂಭವಿಸಿದ್ದು, 9943 ಜನರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಾತನಾಡಿದ ಸಿಎಂ, “ಜಿಲ್ಲೆಗಳಲ್ಲಿರುವ ರಸ್ತೆ ಸುರಕ್ಷಾ ಸಮಿತಿಗಳು ಜಿಲ್ಲೆಯಲ್ಲಿ ಅಪಘಾತ ಪ್ರಮಾಣ ತಡೆಯಲು ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಬೇಕು” ಎಂದು ಹೇಳಿದರು.
ಇಲಾಖೆಗಳ ಸಮನ್ವಯ ಅಗತ್ಯ
“ಕಂದಾಯ, ಪೊಲೀಸ್, ಸಾರಿಗೆ, ನಗರ ಪಾಲಿಕೆ ಎಲ್ಲರೂ ಸಮನ್ವಯದಿಂದ ಕಾರ್ಯ ನಿರ್ವಹಿಸಿದರೆ ಅಪಘಾತಗಳನ್ನು ನಿಯಂತ್ರಿಸಲು ಸಾಧ್ಯ. ರಸ್ತೆ ಸುರಕ್ಷತಾ ಸಪ್ತಾಹಗಳು ಕಾಟಾಚಾರಕ್ಕೆ ನಡೆಯಬಾರದು. ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡರೆ ಹಲವು ಅಪಘಾತಗಳನ್ನು ತಡೆಯಬಹುದಾಗಿದೆ. ನಮ್ಮ ನಿರ್ಲಕ್ಷ್ಯದಿಂದ ಜನರ ಪ್ರಾಣ ಹಾನಿ ಉಂಟಾಗುವುದನ್ನು ಸಹಿಸಲು ಸಾಧ್ಯವಿಲ್ಲ,” ಎಂದು ಸಿಎಂ ಹೇಳಿದರು.
ಮುಂಜಾಗ್ರತಾ ಕ್ರಮಗಳ ಮೇಲೆ ವಿಶೇಷ ಒತ್ತು
ಸಿಎಂ ಸಿದ್ದರಾಮಯ್ಯ, “ಹಾಟ್ಸ್ಟಾಟ್ಗಳನ್ನು ಗುರುತಿಸಿ, ಹೆದ್ದಾರಿಗಳಲ್ಲಿ ಅಂಬ್ಯುಲೆನ್ಸ್ ವ್ಯವಸ್ಥೆ, ಟ್ರಾಮಾ ಸೆಂಟರ್ ನೆಟ್ವರ್ಕ್ ಮಾಡಬೇಕು” ಎಂದು ಸೂಚಿಸಿದರು.
ಸಾರಾಂಶವಾಗಿ, ಸಿಎಂ ಸಿದ್ದರಾಮಯ್ಯ ಅವರು ರಸ್ತೆ ಸುರಕ್ಷತೆ ವಿಷಯದಲ್ಲಿ ಅಧಿಕಾರಿಗಳ ನಿಷ್ಠೆ ಮತ್ತು ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಖಡಕ್ ಸೂಚನೆ ನೀಡಿದ್ದಾರೆ.